SearchBrowseAboutContactDonate
Page Preview
Page 68
Loading...
Download File
Download File
Page Text
________________ ೬೪ ಬೆಳತಿಗೆವಸದನಮೆಸೆದಿರೆ ತಳಿರ್ಜೊಂಪದೊಳುಯ್ಯಲಾಡಿ ಮೆದಳದೊರ್ವಳ್ ಜಳಜದ ಮಣಿಮಂಡಪದೊಳ ಗಳವೆಯಂ ತೂಗಿ ತೊಟ್ಟಿಲೊಳ್ ಸಾರ್ಚಿದವೊಲ್ ಕೊಳದೊಳಗೋಲಾಡಿ ತಳಿರ್ತೆಳಮಾವಿನೊಳುಯ್ಯಲಾಡಿ ನರಪತಿ ಕುಸುಮಾವಳಿಯೊಳ್ ರತಿರಾಗದಿನೋಕುಳಿಯಾಡಿ ವಿಲಾಸಗೋಷ್ಠಿಯೊಳ್ ಕುಳ್ಳಿರ್ದಂ ಗರಟಿಗೆಗಿತ್ತಲ್ ತದ್ದನ ಪರಿಸರದೊಳ್ ಬರುತಮಿರ್ದಕಂಪನರೆಂಬರ್ ತರುಮೂಲದೊಳಿರೆ ನಿಧಿಯಂ ಕುರುಡಂ ಕಾಂತೆ ಚಂಡಕರ್ಮಂ ಕಂಡಂ ಮನುಮಿರೆ ಪುರ್ವಿನ ಮೊದಲೊಳ್ ಮನದೊಳಗಿರೆ ವಾಯು ಕರಣತತಿ ವಾಯುವಿನೊಳ್ ಕುನಿದಿರೆ ಪದ್ಮಾಸನದೊಳ್ ತನುವಿಗೆ ಯೋಗೀಂದ್ರನಾತಚಿಂತೆಯೊಳಿರ್ದಂ ಎಳಗಿದನಾತಂ ಗೌರವ ಮತಿಯದೆಯುಂ ದೀಪವರ್ತಿ ನಿಧಿಗಾಣುದುಮೊಲೆಣಗುವ ತೆಲದಿಂ ಮುನಿ ಕಣೆದೊಯ್ಯನೆ ನೋಡಿ ಪರಸೆ ಬಡೆಕಿಂತೆಂದಂ ಯಶೋಧರ ಚರಿತೆ 00 Go GO 02 ೧೪ ೧೦. ಇನ್ನೊಬ್ಬಳು ಬಿಳಿಯ ಬಟ್ಟೆಯನ್ನುಟ್ಟುಕೊಂಡು ಚಿಗುರ ಚಪ್ಪರದಲ್ಲಿ ಉಯ್ಯಾಲೆ ಯಾಡುತ್ತಾ ಮೆರೆಯುತ್ತಿದ್ದಳು. ಆಗ ತಾವರೆಯ ರತ್ನಮಂಟಪದಲ್ಲಿ ಬಾಲಚಂದ್ರನನ್ನು ತೊಟ್ಟಿಲಲ್ಲಿಟ್ಟು ತೂಗುವಂತೆ ಚೆಲುವು ಚೆಲ್ಲುತ್ತಿತ್ತು. ೧೧. ಯಶೋಮತಿಯೂ ಕುಸುಮಾವಳಿಯೊಂದಿಗೆ ಸರೋವರದಲ್ಲಿ ಓಲಾಡಿದನು ; ಚಿಗುರಿದ ಎಳೆಯ ಮಾವಿನ ಮರದಲ್ಲಿ ಉಯ್ಯಾಲೆಯಾಡಿದನು. ಪ್ರೇಮಾನುರಾಗದಿಂದ ಓಕುಳಿಯಾಡಿದನು. ಅನಂತರ ಒಂದು ಕಡೆ ವಿಲಾಸಗೋಷ್ಠಿಯಲ್ಲಿ ಕುಳಿತುಕೊಂಡನು. ೧೨. ಚಂಡಕರ್ಮನು ಎಂದಿನಂತೆ ತಿರುಗಾಡುತ್ತಾ ಆ ಉದ್ಯಾನದ ಕಡೆಗೆ ಬಂದನು. ಅವನಿಗೆ ಅಲ್ಲಿ ಮರವೊಂದರ ಬುಡದಲ್ಲಿ, ಅಕಂಪನರೆಂಬುವರು ಕುಳಿತುಕೊಂಡಿದ್ದುದು ಕಾಣಿಸಿತು. ಅವನಿಗೆ ಆಗ ಕುರುಡನು ಕೊಪ್ಪರಿಗೆಯನ್ನು ಕಂಡಂತಾಯಿತು. ೧೩. ಅವರು ಮನಸ್ಸನ್ನು ಕೇಂದ್ರೀಕರಿಸಿ ಹುಬ್ಬುಗಳ ನಡುವೆ ನಿಲ್ಲಿಸಿದ್ದರು. ಆ ಮನಸ್ಸಿನಲ್ಲಿ ವಾಯುಗಳನ್ನು ನಿಲ್ಲಿಸಿದ್ದರು. ಆ ವಾಯುವಿನಲ್ಲಿ ಇಂದ್ರಿಯಗಳನ್ನೆಲ್ಲ ನಿಲ್ಲಿಸಿದ್ದರು. ಅವರು ಪದ್ಮಾಸನ ಹಾಕಿ ಆತ್ಮಾನುಸಂಧಾನದಲ್ಲಿ ಮಗ್ನರಾಗಿದ್ದ ಯೋಗಿವರ್ಯರಾಗಿದ್ದರು. ೧೪. ಗೌರವವೆಂದರೇನೆಂದರಿಯದಿದ್ದರೂ ಚಂಡಕರ್ಮನು ತನ್ನಿಂದ ತಾನೇ ಅವರೆದುರು ತಲೆಬಾಗಿಸಿದನು. ನಿಧಿಯನ್ನು ಕಂಡ ಕೂಡಲೆ ದೀಪದ ಕುಡಿ ಆ ಕಡೆ ಬಾಗಿಕೊಳ್ಳುವುದಷ್ಟೆ! ಚಂಡಕರ್ಮನು ನಮಸ್ಕರಿಸಿದ ಹೊತ್ತಿಗೆ ಆ ಮುನಿಗಳು ಕಣ್ಣು ತೆರೆದರು! ಮಣಿದವನನ್ನು ನೋಡಿ ಹರಸಿದರು. ಚಂಡಕರ್ಮನು
SR No.034021
Book TitleYasodhara Carita
Original Sutra AuthorN/A
AuthorJanna
PublisherKannada Sahitya Parishattu
Publication Year2015
Total Pages536
LanguageKannada
ClassificationBook_Other & Kavya
File Size16 MB
Copyright © Jain Education International. All rights reserved. | Privacy Policy