SearchBrowseAboutContactDonate
Page Preview
Page 79
Loading...
Download File
Download File
Page Text
________________ ನಾಲ್ಕನೆಯ ಅವತಾರ ಎನಿತೊಳವು ಜೀವರಾಶಿಗ ಳನಿತುಮನೋರಂತೆ ಕೊಂದು ತಿಂದು ತಣಿವಿಲೆನೆ ಬರ್ದೆನಿಂದುವರಮಿನೆನಗಿನ್ನೆಂತಪ್ಪ ನರಕಮಿದಿರ್ವಂದಪುದೋ ಎಂದು ಸುದತ್ತಾಚಾರ್ಯರ ಮುಂದಣಿನರಮನೆಗೆ ಪೋಗದುರ್ವಿಭರಮಂ ನಂದನನೊಳಭಯರುಚಿಯೊಳ್ ಸಂದಿಸಿ ತಾನ್ ಜೈನದೀಕ್ಷೆಯಂ ಕೈಕೊಂಡಂ ಶ್ರೀಜಿನದೀಕ್ಷೆಗೆ ತನುವಂ ಯೋಜಿಸೆ ಕಲ್ಯಾಣಮಿತ್ರನುಂಬೆರಸು ಯಥಾ ರಾಜಾ ತಥಾ ಪ್ರಜಾ ಎಂ ಬೋಜೆಯಿನಂದರಸುಗಳ ಪಲರ್ ತಳಸಂದ‌ ಆಗ ತಂದೆಯ ತಪದು ದ್ಯೋಗಂ ತಡವಾಗದಂತೊಡಂಬಟ್ಟು ಮಹಿ ಭೋಗಕ್ಕನುಜ ಯಶೋಧರ ನಾಗಿರೆ ಬಕಭಯರುಚಿಯುಮನುಜೆಯ ಸಹಿತಂ ತಮದಿಂದಂ ಪೊಱಮಟ್ಟು ತಮಚಾರಿತ್ರದೊಳೆ ನೆರೆದು ಮೆಯ್ದಿಕ್ಕಿದ ಸಂಯಮದ ಸುದತ್ತಾಚಾರ್ಯರ ಸಮುದಾಯದೊಳಿರ್ದು ತತ್ವಪರಿಣತನಾದು 2.99 ೬೪ ೬೫ ೬೬ 22 ಎಂದುಕೊಂಡನು. ೬೩. ನಾನು ಇದುವರೆಗೆ ಎಷ್ಟೆಷ್ಟು ಪ್ರಾಣಿಗಳಿವೆಯೋ ಅಷ್ಟಷ್ಟನ್ನು ಒಂದೇ ಸವನೆ ಕೊಲ್ಲುತ್ತಾ ಬಂದು ಅವುಗಳನ್ನು ತಿಂದಿದ್ದೇನೆ. ಆದರೂ ತೃಪ್ತಿ ಯುಂಟಾಗದೆ ಇದುವರೆಗೂ ಬಾಳಿದೆ. ನನಗೆ ಇನ್ನೆಂತಹ ನರಕವು ಕಾದಿದೆಯೋ ? ವಿಧಿಯೆ !” ೬೪, ಈ ಯೋಚನೆ ಬಂದ ಮೇಲೆ ಯಶೋಮತಿ ಅರಮನೆಗೂ ಹೋಗಲಿಲ್ಲ. ರಾಜ್ಯಭಾರವನ್ನೆಲ್ಲ ಮಗನಾದ ಅಭಯರುಚಿಗೆ ಒಪ್ಪಿಸಿ ತಾನು ಜೈನದೀಕ್ಷೆಯನ್ನು ವಹಿಸಿಕೊಂಡನು. ೬೫. ಕಲ್ಯಾಣಮಿತ್ರನೂ ದೀಕ್ಷೆಯನ್ನು ಕೈಕೊಂಡನು. ಆಗ “ರಾಜನಂತೆ ಪ್ರಜೆ” ಎಂಬ ಮಾತನ್ನು ಸಾರ್ಥಕಪಡಿಸುವಂತೆ ಅನೇಕ ನರಪತಿಗಳೂ ದೀಕ್ಷಾಬದ್ಧರಾಗಲು ನಿರ್ಧರಿಸಿದರು. ೬೬. ತಂದೆಯ ತಪಸ್ಸಿನ ಉದ್ಯೋಗಕ್ಕೆ ತಡೆಯಾಗಬಾರದು ಎಂದು ಅಭಯರುಚಿ ರಾಜ್ಯಭಾರವನ್ನು ವಹಿಸಲು ಸಮ್ಮತಿಯಿತ್ತನು. ಆಮೇಲೆ ಅವನು ತನ್ನ ತಮ್ಮ ಯಶೋಧರನಿಗೆ ರಾಜ್ಯ ಭೋಗವನ್ನೊಪ್ಪಿಸಿ ತಂಗಿಯೊಂದಿಗೆ ತಪಸ್ಸಿಗೆ ಹೊರಟನು. ೬೭, ಅಜ್ಞಾನಾಂಧ ಕಾರದಿಂದ ಹೊರಬಂದು ಉತ್ತಮ ಚಾರಿತ್ರದಲ್ಲಿ ಸೇರಿಕೊಂಡು ಸಂಯಮವಶನಾಗಿ ಸುದತ್ತಾಚಾರ್ಯರ ಶಿಷ್ಯವೃಂದದಲ್ಲಿ ಸೇರಿದನು ; ತತ್ವದಲ್ಲಿ ಪರಿಣತಿಯನ್ನು ಪಡೆದನು.
SR No.034021
Book TitleYasodhara Carita
Original Sutra AuthorN/A
AuthorJanna
PublisherKannada Sahitya Parishattu
Publication Year2015
Total Pages536
LanguageKannada
ClassificationBook_Other & Kavya
File Size16 MB
Copyright © Jain Education International. All rights reserved. | Privacy Policy