________________
38
ಅಂತಃಕರಣದ ಸ್ವರೂಪ ಅದರ ಪರಿಣಾಮ ಸ್ವರೂಪವಾಗಿ ಉತ್ಪನ್ನವಾಗುವ ಧ್ಯಾನದಲ್ಲಿ ಅಹಂಕಾರವು ಇರುವುದಿಲ್ಲ ಅಲ್ಲವೇ?
ದಾದಾಶ್ರೀ: ಹೌದು, ಶುಕ್ತಧ್ಯಾನದ ಪರಿಣಾಮವು ಯಾವಾಗ ಬರುವುದೋ, ಆಗ ಮೋಕ್ಷ ಪ್ರಾಪ್ತಿಯಾಗುತ್ತದೆ. ಪ್ರಶ್ನೆಕರ್ತ: ಧೈಯವು ನಿಶ್ಚಯವಾದಾಗ, ಅದರಲ್ಲಿ ಅಹಂಕಾರದ ಪಾತ್ರವೇನಾದರು ಇದೆಯೇ? ದಾದಾಶ್ರೀಧೈಯವನ್ನು ಅಹಂಕಾರವೇ ನಿಶ್ಚಯ ಮಾಡುತ್ತದೆ. ಮೋಕ್ಷದ ಧೈಯ ಮತ್ತು ಧ್ಯಾತ ನಿರಹಂಕಾರಿಯಾದಾಗ, ಶುಕ್ತಧ್ಯಾನವು ಉಂಟಾಗುವುದು. ಪ್ರಶ್ನಕರ್ತ: ಧರ್ಮಧ್ಯಾನದ ಧೈಯದಲ್ಲಿ ಅಹಂಕಾರದ ಸೂಕ್ಷ್ಮ ಹಾಜರಿ ಇದೆಯೇ? ದಾದಾಶ್ರೀ: ಹೌದು, ಅಹಂಕಾರದ ಉಪಸ್ಥಿತಿ ಇಲ್ಲದೆ ಧರ್ಮಧ್ಯಾನವು ಉಂಟಾಗುವುದೇ ಇಲ್ಲ. ಪ್ರಶ್ನಕರ್ತ: ಆರ್ತ, ರೌದ್ರ ಹಾಗೂ ಧರ್ಮಧ್ಯಾನ, ಇವುಗಳನ್ನು ಪುದ್ಗಲ್ ಪರಿಣಾಮವೆಂದು
ಹೇಳಬಹುದೆ?
ದಾದಾಶ್ರೀ: ಹೌದು, ಅವುಗಳನ್ನು ಪುದ್ಗಲ್ ಪರಿಣಾಮವೆಂದು ಕರೆಯಲಾಗುತ್ತದೆ ಹಾಗೂ ಶುಕ್ತಧ್ಯಾನವು ಸ್ವಾಭಾವಿಕ ಪರಿಣಾಮವಾಗಿದೆ.
ಪ್ರಶ್ನಕರ್ತ: ಹಾಗಾದರೆ, ಶುಕ್ತಧ್ಯಾನವು, ಆತ್ಮದ ಪರಿಣಾಮವಾಗಿದೆ ಅಲ್ಲವೇ? ದಾದಾಶ್ರೀ: ಹೌದು.
ಪ್ರಶ್ಯಕರ್ತ: ಶುಕ್ತಧ್ಯಾನವಾಗಿದ್ದರೆ, ಅದರಿಂದ ಯಾವ ಕರ್ಮವಾಗುವುದೋ, ಅದು ಬಹಳ ಒಳ್ಳೆಯದ್ದಾಗಿರುತ್ತದೆ ಹಾಗೂ ಧರ್ಮಧ್ಯಾನವಾಗಿದ್ದರೆ, ಆಗ ಅದು ಸ್ವಲ್ಪ ಕಡಿಮೆ ಗುಣಮಟ್ಟದ ಕರ್ಮವಾಗಿರುತ್ತದೆ. ಇದು ಸರಿಯೇ?
ದಾದಾಶ್ರೀ: ಶುಕ್ತಧ್ಯಾನವಾಗಿದ್ದರೆ, ಆಗ ಕ್ರಮ (ಕ್ರಮಿಕ್) ಮಾರ್ಗದಲ್ಲಿ ಕರ್ಮವು ಇರುವುದೇ ಇಲ್ಲ. ಇದು ಅಕ್ರಮ (ಅಕ್ರಮ್) ಮಾರ್ಗವಾಗಿರುವುದರಿಂದ, ಇಲ್ಲಿ ಕರ್ಮವು ಇರುತ್ತದೆ. ಆದರೆ ಇದರಲ್ಲಿ ತಾನು ಕರ್ತನಾಗದೆ, ಕೇವಲ ಕರ್ಮವನ್ನು ಬರಿದಾಗಿಸುವ ಭಾವದಿಂದ ನಡೆಯುವುದು. ಇಲ್ಲಿ (ಅಕ್ರಮ್ ಮಾರ್ಗದಲ್ಲಿ) ಕರ್ಮವನ್ನು ಮುಗಿಸದೆಯೇ 'ಜ್ಞಾನವು' ಪ್ರಾಪ್ತಿಯಾಗಿದೆ ಅಲ್ಲವೇ!